ಚೆನ್ನೈ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಪ್ರಕರಣಗಳನ್ನು ನಿಯಂತ್ರಿಸಲು ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ.ಗಳನ್ನು ದೇಣಿಗೆ ನೀಡಿದ್ದಾರೆ.
ಇಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕಚೇರಿಗೆ ಭೇಟಿ ನೀಡಿದ ರಜಿನಿಕಾಂತ್ ಈ ದೇಣಿಗೆ ಹಣದ ಚೆಕ್ ಹಸ್ತಾಂತರಿಸಿದ್ದಾರೆ.
ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ. ಸರ್ಕಾರ ಹೇರಿರುವ ನಿರ್ಬಂಧಗಳಿಗೆ ಎಲ್ಲರೂ ಸಹಕರಿಸಬೇಕು ಎಂದು ನಟ ರಜಿನಿಕಾಂತ್ ಮನವಿ ಮಾಡಿದರು.
ತಮಿಳು ಚಿತ್ರರಂಗದ ಹಿರಿಯ ನಟ ಸುಪರ್ ಸ್ಟಾರ್ ರಜನಿಕಾಂತ್ ಅವರು ಈ ದೇಣಿಗೆ ನೀಡಿದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.