ನವದೆಹಲಿ prajakiran.com : ಮುಂದಿನ ತಿಂಗಳು ನಡೆಯಲಿರುವ ಶ್ರೀಲಂಕಾ ಮತ್ತು ಭಾರತ ಏಕದಿನ ಕ್ರಿಕೆಟ್ ಮತ್ತು ಟಿ20 ಕ್ರಿಕೆಟ್ ಸರಣಿ ಪಂದ್ಯ ಆರಂಭವಾಗಲಿದ್ದು, ಭಾರತ ತಂಡಕ್ಕೆ ಮತ್ತಿಬ್ಬರು ತರಬೇತುದಾರರನ್ನು ನೇಮಿಸಲಾಗಿದೆ.
ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಜತೆಗೆ ಟಿ. ದಿಲೀಪ್ ಮತ್ತು ಪಾರಸ್ ಮಾಂಬ್ರೆ ಅವರನ್ನು ಆಯ್ಕೆ ಮಾಡಲಾಗಿದ್ದು, ಟಿ. ದಿಲೀಪ್ ಫೀಲ್ಡಿಂಗ್ ಮತ್ತು ಪಾರಸ್ ಮಾಂಬ್ರೆ ಬೌಲಿಂಗ್ ಕೋಚ್ ಆಗಿರುತ್ತಾರೆ.
ಈಗಾಗಲೇ ಬಿಸಿಸಿಐ ಅನುಭವಿ ಮತ್ತು ಯುವ ಆಟಗಾರರನ್ನು ಒಳಗೊಂಡ ಒಟ್ಟು 20 ಸದಸ್ಯರ ಭಾರತ ತಂಡವನ್ನು ಪ್ರಕಟ ಮಾಡಿದೆ.
ಜೂನ್ 28ರಂದು ಶ್ರೀಲಂಕಾ ಪ್ರವಾಸಕ್ಕೆ ತೆರಳಲಿರುವ ಭಾರತ ತಂಡ, ಕೊಲಂಬಿದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಜುಲೈ- 13,16, 18 ರಂದು ಏಕದಿನ ಮತ್ತು ಜುಲೈ-21,23,25 ರಂದು ಟಿ20 ಪಂದ್ಯ ಆಡಲಿದೆ.