ವಿಜಯಪುರ prajakiran.com : ಕ್ರೂಜರ್ ಹಾಗೂ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕ್ರೂಜರ್ ಪಲ್ಟಿಯಾದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಿ.ಕೆ. ಯರಗಲ್ ಬಳಿ ನಡೆದಿದೆ.
ಈ ವೇಳೆ ವಾಹನದಲ್ಲಿದ್ದ ಮದುಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಉಳಿದ ಏಳು ಜನರಿಗೆ ಗಂಭೀರ ಗಾಯಗಳಾಗಿವೆ.
ಮದುಮಗಳು ರಾಣಿ ಸಾವನ್ನಪ್ಪಿದ್ದು , ಮದುಮಗ ಗಣೇಶ್ ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಸಿಂದಗಿ ತಾಲೂಕಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಅವರು ಕ್ರೂಜರ್ ದಲ್ಲಿ ಕೊಕಟನೂರ್ ದೇವಸ್ಥಾನಕ್ಕೆ ತೆರಳುವ ವೇಳೆ ಟೆಂಪೊ ಚಾಲಕನ ನಿರ್ಲಕ್ಷ್ಯದಿಂದ ಅಪಘಾತವಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.