ನವದೆಹಲಿ prajakiran.com : ಕೊರೋನಾ ಸೋಂಕು ಬಡಿದೊಡಿಸಲು ಹೋರಾಟ ಮಾಡುತ್ತಿರುವ ಎಲ್ಲಾ ವೈದ್ಯರು, ದಾದಿಯರು, ಅರೆ ವೈದ್ಯಕೀಯ ಸಿಬ್ಬಂದಿಗೆ ಭಾರತ ರತ್ನ ಗೌರವ ನೀಡಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಅವರು, ಇಂಥ ಒಂದು ನಿರ್ಧಾರ ಸೋಂಕಿನ ವಿರುದ್ಧ ಹೋರಾಟ ನಡೆಸಿ ಹುತಾತ್ಮರಾಗಿರುವ ವೈದ್ಯ ಸಿಬ್ಬಂದಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಪ್ರತಿಪಾದಿಸಿದ್ದಾರೆ.
ವೈದ್ಯರಿಗೆ ಭಾರತ ರತ್ನ ನೀಡಲು ನಿಯಮಗಳು ಅಡ್ಡಿಯಾಗುತ್ತಿದ್ದರೆ, ಅವುಗಳಲ್ಲಿ ಬದಲಾವಣೆ ಮಾಡಬೇಕಾಗಿದ್ದರೆ, ಅದನ್ನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.