ಬೆಂಗಳೂರು Prajakiran.com : ಪರಪ್ಪನ ಅಗ್ರಹಾರದ ಜೈಲಿನ ಮೇಲೆ ಸಿಸಿಬಿ ಪೊಲೀಸ್ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ದಾಳಿ ನಡೆಸಿದ್ದಾರೆ.
ಅನ್ಲಾಕ್ ನಂತರ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆ ಏಕಾಏಕಿ ಈ ದಾಳಿಯನ್ನು ನಡೆಸಲಾಗಿದೆ ಎನ್ನಲಾಗಿದೆ.
ಬೆಳಗಿನ ಜಾವ ಸುಮಾರು 5 ಗಂಟೆಗೆ ಡಾಗ್ ಸ್ಕ್ವಾಡ್ ಸಮೇತ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ಜೈಲಿನ ಪ್ರತಿ ಬ್ಯಾರಕ್ನಲ್ಲೂ ತಪಾಸಣೆ ನಡೆಸಿದ್ದಾರೆ.
ದಾಳಿ ವೇಳೆ ಕೆಲವು ಮಾರಕಾಸ್ತ್ರಗಳು, ಮೊಬೈಲ್, ಗಾಂಜಾ, ಸಿಗರೇಟ್ ಪತ್ತೆಯಾಗಿದ್ದು, ಎಲ್ಲವನ್ನೂ ಸೀಜ್ ಮಾಡಿ ವಶಕ್ಕೆ ಪಡೆಯಲಾಗಿದೆ ಎಂದು ಜಂಟಿ ಪೋಲಿಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.