ಧಾರವಾಡ prajakiran.com : ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಧಾರವಾಡ ಸಂಜೀವಿನಿ ಪಾರ್ಕ್ ಬಳಿ ಗುರುವಾರ ನಡೆದಿದೆ.
ಇಬ್ಬರು ಬೈಕ್ ಸವಾರರು ಮಾದರಮಡ್ಡಿಯ ರವಿ ಹಾಗೂ ಸದಾನಂದ ಎಂದು ಗುರುತಿಸಲಾಗಿದೆ.
ಇಬ್ಬರೂ ಆಪ್ತಮಿತ್ರರ ಶವಗಳು ನಡು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ದೃಶ್ಯ ಎಲ್ಲರ ಮನ ಕಲುಕುವಂತಿತ್ತು.
ಮಾಹಿತಿ ಅರಿತು ಘಟನಾ ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಸಂಚಾರಿ ಪೊಲೀಸರು ಮಾಹಿತಿ ಕಲೆ ಹಾಕಿ, ಮುಂದಿನ ಕ್ರಮ ಜರುಗಿಸಿದ್ದಾರೆ.