ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್
ಧಾರವಾಡ prajakiran.com : ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್ , ಅಕ್ಟೋಬರ್ 28, 29 ಮತ್ತು 30 ರಂದು ಧಾರವಾಡದ ಹೊರವಲಯದಲ್ಲಿರುವ ಗರಗದ ಮಾಧವ ನಗರದಲ್ಲಿನ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆಯಲಿದೆ.
ಬೈಠಕ್ ನಲ್ಲಿ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಮತ್ತು ಮಾ. ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ ಜೊತೆಗೆ ಅಖಿಲ ಭಾರತೀಯ, ಕ್ಷೇತ್ರೀಯ ಮತ್ತು ಪ್ರಾಂತ ಸ್ತರದ ಕಾರ್ಯಕರ್ತರು ಈ ಬೈಠಕನಲ್ಲಿ ಭಾಗವಹಿಸಲಿದ್ದಾರೆ.
ದೇಶದೆಲ್ಲಕಡೆಗಳಿಂದ ಸುಮಾರು 350 ಪ್ರತಿನಿಧಿಗಳು ಈ ಬೈಠಕನಲ್ಲಿ ಭಾಗವಹಿಸಲಿದ್ದಾರೆ.
ಮಾರ್ಚ ತಿಂಗಳಲ್ಲಿ ನಡೆಯುವ ಅಖಿಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ ಸಂಘವು ಯೋಜನೆಯನ್ನು ರೂಪಿಸುತ್ತದೆ.
ಇದಾದ 6 ತಿಂಗಳ ನಂತರ ನಡೆಯುವ ಅಖಿಲ ಭಾರತೀಯ ಕಾರ್ಯಕಾರಿ ಮಂಡಳ ಬೈಠಕ್ ಇದರ ಪರಿಶೀಲನಾ ಸಭೆಯಾಗಿದ್ದು, ವಿಸ್ತರಣೆಯ ಯೋಜನೆಗಳು, ಕಾರ್ಯಕರ್ತರ ತರಬೇತಿ ಮತ್ತು ಸಂಘಟನಾತ್ಮಕ ಚಟುವಟಿಕೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಅಖಿಲ ಭಾರತೀಯ ಪ್ರಚಾರ ಪ್ರಮುಖ ಸುನೀಲ್ ಅಂಬೇಕರ್ ತಿಳಿಸಿದ್ದಾರೆ.