ರಾಜ್ಯ

ಕ್ರೂಸರ್ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಏಳು ಜನ ಸಾವು

ಬೆಳಗಾವಿ prajakiran.com : ವೇಗವಾಗಿ ಹೊರಟಿದ್ದ ಕ್ರೂಸರ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಸ್ಥಳದಲ್ಲಿಯೇ ಏಳು ಜನರು ಸಾವಿಗೀಡಾಗಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದೆ.

ಬೆಳಗಾವಿ ತಾಲೂಕಿನ ಕಣಬರಗಿ ಬಳಿಯ ಕಲ್ಯಾಳ ಪುಲ್ ಬಳಿ ಈ ಹೃದಯ ವಿದ್ರಾವಕ ಘಟನೆ ಜರುಗಿದೆ.

ಅಕ್ಕತಂಗಿಯರ ಹಾಳದಿಂದ ಬೆಳಗಾವಿಗೆ ಬರುತ್ತಿದ್ದ ಕ್ರೂಸರ್
ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್ ಬಿದ್ದಿದೆ.


ಇದರಿಂದಾಗಿ ಕ್ರೂಸರ್ ನಲ್ಲಿದ್ದ ಏಳು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಈ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿ ಅರಿತು ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿ ಬಳಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷ ರುಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *