ರಾಜ್ಯ

ಪ್ರಮಾಣ ವಚನ ಸ್ವೀಕರಿಸಿದ 24 ನೂತನ ಸಚಿವರು

ಸಿದ್ದು, ಡಿ.ಕೆ ಕಾಲಿಗೆ ಬಿದ್ದ ಹಲವು ಸಚಿವರು…..!

 

ಬೆಂಗಳೂರು ಪ್ರಜಾಕಿರಣ.ಕಾಮ್ : ರಾಜ್ಯದ 24 ಜನ ಶಾಸಕರು ಶನಿವಾರ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗ್ಲೆಹ್ಲೋಟ್ ಅವರಿಂದ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಗದಗನ ಹೆಚ್
ಕೆ ಪಾಟೀಲ್ , ಕಲಬುರಗಿಯ ಸೇಡಂ ಶಾಸಕ ಶರಣ ಪ್ರಕಾಶ್ ಪಾಟೀಲ್ , ಯಾದಗಿರಿ ಜಿಲ್ಲೆಯ ಶಹಪೂರ ಶಾಸಕ ಶರಣಬಸ್ಸಪ್ಪ ದರ್ಶನಾಪೂರ,
ಬೀದರ ಜಿಲ್ಲೆಯ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಹಾಗೂ ಬೀದರ್ ಉತ್ತರ ಶಾಸಕ ರಹೀಂ‌ಖಾನ್ , ಮಂಡ್ಯದ ನಾಗಮಂಗಲ ಶಾಸಕ ಚೆಲುವರಾಯಸ್ವಾಮಿ, ಮೈಸೂರಿನ ಟಿ ನರಸೀಪುರ ಶಾಸಕ ಹೆಚ್. ಸಿ‌ ಮಹಾದೇವಪ್ಪ ,ಪಿರಿಯಾ ಪಟ್ಟಣದ ಕೆ. ವೆಂಕಟೇಶ, ಬೆಂಗಳೂರಿನ ಬ್ಯಾಟರಾಯನಪುರ
ಕೃಷ್ಣ ಬೈರೆಗೌಡ, ಗಾಂಧಿನಗರದ
ಶಾಸಕ ದಿನೇಶ ಗುಂಡೂರಾವ್, ಹೆಬ್ಬಾಳ ಶಾಸಕ ಬೈರತಿ ಸುರೇಶ,
ಮಧುಗಿರಿಯ ಕೆ.ಎನ್. ರಾಜಣ್ಣ, ವಿಜಯಪುರ ಜಿಲ್ಲೆಯ ಶಿವಾನಂದ ಪಾಟೀಲ, ಬಾಗಲಕೋಟೆ ಜಿಲ್ಲೆಯ ಆರ್. ಬಿ. ತಿಮ್ಮಾಪುರ, ದಾವಣಗೆರೆಯ ಎಸ್.ಎಸ್. ಮಲ್ಲಿಕಾರ್ಜುನ, ಕನಕಗಿರಿ ಶಾಸಕ ಶಿವರಾಜ್ ತಂಗಡಗಿ, ಉತ್ತರ ಕನ್ನಡ ಜಿಲ್ಲೆಯ ಮಂಕಾಳ ವೈದ್ಯ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಚಿತ್ರದುರ್ಗ ಜಿಲ್ಲೆಯ ಡಿ. ಸುಧಾಕರ್, ಧಾರವಾಡ ಜಿಲ್ಲೆಯ ಕಲಘಟಗಿ ಶಾಸಕ ಸಂತೋಷ ಲಾಡ್, ರಾಯಚೂರಿನ ಎನ್.ಎಸ್.‌ ಭೋಸರಾಜು, ಬಳ್ಳಾರಿಯ ಬಿ. ನಾಗೇಂದ್ರ, ಶಿವಮೊಗ್ಗ ಜಿಲ್ಲೆಯ ಸೊರಬ ಶಾಸಕ‌ ಮಧು ಬಂಗಾರಪ್ಪ, ಚಿಕ್ಕಬಳ್ಳಾಪುರ ಜಿಲ್ಲೆಯ ಎಂ.ಸಿ. ಸುಧಾಕರ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಪುಟ ಸಹೋದ್ಯೋಗಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸ್ಪೀಕರ್ ಯು.ಟಿ
ಖಾದರ್ ಹೃದಯಪೂರ್ವಕವಾಗಿ ಅಭಿನಂದಿಸಿದರು.

ಈ ವೇಳೆ ಹಲವು ಸಚಿವರು ಮೊದಲ ಸಲ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಸಂಭ್ರಮದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಕಾಲಿಗೆ ನಮಸ್ಕರಿಸಿ ಆರ್ಶೀವಾದ ಪಡೆದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *