*ದೆಹಲಿ ಸಿಎಂ ಅರವಿಂದ ಕೇಜರಿವಾಲ್ ಅರೆಸ್ಟ್*
*ಎರಡು ಗಂಟೆಗಳ ವಿಚಾರಣೆ ಬಳಿಕ ಇಡಿ ಕಚೇರಿಯತ್ತ ಸಿಪ್ಟ*
*ದೆಹಲಿ ಅಬಕಾರಿ ನೀತಿ ಅಕ್ರಮ ಹಗರಣ*
*ಸಚಿವ ಮನೀಸ್ ಸಿಸೋಡಿಯಾ ಬಂಧನ ಬಳಿಕ ಸಿಎಂ ಕೇಜರಿವಾಲ್ ಗೆ ಸಂಕಷ್ಟ*
ನವದೆಹಲಿ ಪ್ರಜಾಕಿರಣ.ಕಾಮ್ : ಒಂಬತ್ತು ಬಾರಿ ವಿಚಾರಣೆಗೆ ಹಾಜರು ಆಗುವಂತೆ ಸಮನ್ಸ್ ನೀಡಿದರೂ ಕ್ಯಾರೆ ಎನ್ನದ ದೆಹಲಿ ಸಿಎಂ ಅರವಿಂದ ಕೇಜರಿವಾಲ್ ಅವರನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ.
ಸುಮಾರು ಮುನ್ನೂರು ಕೋಟಿಗೂ ಅಧಿಕ ಅಕ್ರಮ ಹಣ ವರ್ಗಾವಣೆ ಆಗಿದ ಎನ್ನುವ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಅಬಕಾರಿ ಸಚಿವರಾಗಿದ್ದ ಮನೀಶ್ ಸಿಸೋಡಿಯಾ ಅವರನ್ನು ಕೂಡ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದರು.
ಅವರ ಬಂಧನದ ಬಳಿ ವಿಚಾರಣೆಗೆ ಹಾಜರು ಆಗುವಂತೆ ಹಲವು ಬಾರಿ ನೋಟಿಸ್ ನೀಡಿದ್ದರು. ವಿಚಾರಣೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ಸಂಜೆ ಅವರ ನಿವಾಸಕ್ಕೆ ತೆರಳಿ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿ ಅವರ ಮೊಬೈಲ್ ವಶಕ್ಕೆ ತೆಗೆದುಕೊಂಡರು.
ಅಲ್ಲದೆ, ಹೆಚ್ಚಿನ ಮಾಹಿತಿಗಾಗಿ ಅವರನ್ನು ವಶಕ್ಕೆ ತೆಗೆದುಕೊಂಡು ನಾಳೆ ಕೋರ್ಟ್ ಗೆ ಹಾಜರು ಪಡಿಸಲು ನಿರ್ಧರಿಸಿದ್ದಾರೆ.
ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ತಡರಾತ್ರಿ ಸುಪ್ರೀಂಕೋರ್ಟ್ ಗೆ ಮೇಲ್ಮನ್ಮವಿ ಸಲ್ಲಿಸಿದ್ದಾರೆ.
ತುರ್ತು ಪ್ರಕರಣ ಎಂದು ಪರಿಗಣಿಸಿ ರಾತ್ರಿಯೇ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ರಜಿಸ್ಟಾರ್ ಅವರಿಗೆ ಮನವಿ ಮಾಡಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರದ ಬಿಜೆಪಿ ನೇತೃತ್ವದ ನರೇಂದ್ರ ಮೋದಿಯವರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಆಮ್ ಆದ್ಮಿ ಕಾರ್ಯಕರ್ತರು ದೆಹಲಿಯ ಹಲವಡೆ ಬೀದಿಗಿಳಿದು ಪ್ರತಿಭಟನೆ ನಡೆಸಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದರು.