ಬೆಂಗಳೂರು ಪ್ರಜಾಕಿರಣ.ಕಾಮ್ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕಿಡ್ನಾಪ್ ಮಾಡಿಸಿದ ಆರೋಪದ ಹಿನ್ನೆಲೆಯಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಹಾಲಿ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರಿಗೆ ಜಾಮೀನು ದೊರೆತಿದೆ.
ಕಳೆದ ಐದು ದಿನಗಳಿಂದ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿದ್ದ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದ್ದಾರೆ.
ಸಾಕ್ಷಿಗಳ ಮೇಲೆ ಯಾವುದೇ ರೀತಿಯ ಒತ್ತಡ ಹೇರದಂತೆ ಹಾಗೂ ಕೆ ಆರ್. ನಗರ ಪ್ರವೇಶ ಮಾಡದಂತೆ ಸೂಚನೆ ನೀಡಿದೆ. ಐ ಓ ಎದುರು ಹಾಜರು ಆಗುವಂತೆ ಸೂಚನೆ ನೀಡಿ ಷರತ್ತು ಬದ್ಧ ಜಾಮೀನು ನೀಡಿದೆ.
ಹೆಚ್.ಡಿ. ರೇವಣ್ಣ ಅವರ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ ಅವರು ಪ್ರಬಲ ವಾದ ಮಂಡಿಸಿದ್ದರು.
ಎಫ್ ಐ ಆರ್ ನಲ್ಲಿರುವ ಹಲವು ಲೋಪದೋಷಗಳನ್ನು ಎತ್ತಿ ಹಿಡಿದಿದೆ. ಹಲವು ಸೆಕ್ಷನ್ ಅನ್ವಯ ಆಗಲ್ಲ.
ಇದು ರಾಜಕೀಯ ದುರುದ್ದೇಶದ ಪ್ರಕರಣ. ಎಂದು ಜಾಮೀನು ಮಂಜೂರಾದ ಬಳಿಕ ಮಾತನಾಡಿದ ಹಿರಿಯ ವಕೀಲ ಸಿ.ವಿ. ನಾಗೇಶ,
ಹೇಳಿದರು.
ಜಾಮೀನು ದೊರೆತರೂ ಇಂದೇ ಮೆಮೋ ನೀಡಲು ನ್ಯಾಯಾಲಯವು ನಿರಾಕರಿಸಿದ ಹಿನ್ನೆಲೆಯಲ್ಲಿ
ನಾಳೆಗೆ ರೇವಣ್ಷ ಜೈಲಿನಿಂದ ಬಿಡುಗಡೆ ಆಗಬಹುದು ಎಂದರು.
ರೇವಣ್ಣಗೆ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು.