ಅಮೃತ್ ಸರ್ prajakiran.com : 2022ರ ಪಂಜಾಬ್ ವಿಧಾನಸಭಾ ಚುನಾವಣೆ ಮೇಲೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸಿಖ್ ಸಮುದಾಯದ ವ್ಯಕ್ತಿ ಆಪ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಸಿಖ್ ಸಮುದಾಯದ ವ್ಯಕ್ತಿ ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ. ಸಿಎಂ ಅಭ್ಯರ್ಥಿ ಯಾರು ಎಂಬುದನ್ನು ಮುಂದೆ ಚರ್ಚಿಸಲಾಗುವುದು, ಆ ವ್ಯಕ್ತಿಯ ಬಗ್ಗೆ ಪಂಜಾಬ್ ಹೆಮ್ಮೆ ಪಡಲಿದೆ ಎಂದು ಹೇಳಿದ್ದಾರೆ.
ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಇನ್ನಷ್ಟು ಬಲ ನೀಡುವ ನಿಟ್ಟಿನಲ್ಲಿ ಮಾಜಿ ಐಪಿಎಸ್ ಅಧಿಕಾರಿ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಕುನ್ವರ್ ವಿಜಯ್ ಪ್ರತಾಪ್ ರಾಜಕಾರಣಿ ಅಲ್ಲ, ಅವರನ್ನು ಆಮ್ ಆದ್ಮಿ ಕಾ ಪೊಲೀಸ್ ವಾಲಾ ಎಂದು ಕರೆಯುತ್ತೇನೆ. ನಾವೆಲ್ಲರೂ ರಾಷ್ಟ್ರ ಸೇವೆ ಮಾಡಲು ಇಲ್ಲಿದ್ದೇವೆ. ಈ ಮನೋಭಾವದಿಂದ ಅವರು ಇಂದು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದರು.