ಹುಬ್ಬಳ್ಳಿ ಪ್ರಜಾಕಿರಣ.ಕಾಮ್ :
ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ UUCMS ತಂತ್ರಾಶದ ಲೋಪ ದೋಷಗಳನ್ನು ಬಗೆಹರಿಸಲು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು
ಈಗಾಗಲೇ ನಡೆದಿರುವ ಪರೀಕ್ಷೆಗಳ ಮೌಲ್ಯ ಮಾಪನವನ್ನು ನಡೆಸಿ ಕೂಡಲೇ ಫಲಿತಾಂಶವನ್ನು ನೀಡುವ ಅಗತ್ಯವಿದೆ ಎಂದು ಆಗ್ರಹಿಸಿದರು.
ಮೊದಲ ವರ್ಷದ ಫಲತಾಂಶ ತಿಳಿಯದೆ ವಿಿದ್ಯಾರ್ಥಿಗಳು ಗೊಂದಲದಲ್ಲಿ ಇರುವಂತಾಗಿದೆ ಎಂದು ದೂರಿದರು.
ಕಳೆದ ಎರಡು ವರ್ಷಗಳಿಂದ ತಾಂತ್ರಿಕ ದೋಷದಿಂದ ಹಲವು ವಿದ್ಯಾರ್ಥಿಗಳಿಗೆ ಇನ್ನು ವಿದ್ಯಾರ್ಥಿ ವೇತನ ದೊರತಿಲ್ಲ.
ರಾಜ್ಯ ಸರ್ಕಾರ ಕೂಡಲೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ವಿದ್ಯಾರ್ಥಿಗಳು ಈಗಾಗಲೇ ತಮ್ಮ ಕಾಲೇಜು ಶುಲ್ಕವನ್ನು ಪಾವತಿಸಿದ್ದು, ಸಮಸ್ಯೆಯನ್ನು ಬಗಹರಿಸಬೇಕು ಎಂದು ಆಗ್ರಹಿಸಿದರು.
*ವರದಿ ಕಿರಣಗೌಡ ಉ ತುಪ್ಪದಗೌಡ್ರ ಹುಬ್ಬಳ್ಳಿ*