ರಾಜ್ಯ

ಶಿಕ್ಷಕಿಯಿಂದ ಲಂಚ ಪಡೆಯುವಾಗ ಎಸಿಬಿ ಬಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ, ಎಸ್ ಡಿ ಎ

ಕಲಬುರಗಿ prajakiran.com  : ಭ್ರಷ್ಟಾಚಾರ ನಿಯಂತ್ರಣ ದಳದ ಬಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಎಸ್ ಡಿ ಎ ಬಿದ್ದ ಘಟನೆ ಗುರುವಾರ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಆಳಂದ ಬಿಇಓ ಪರಮೇಶ , ಎಸ್.ಡಿ.ಎ ಶಶಿಕಾಂತ್ ಬಂಧಿತ ಲಂಚಬಾಕಅಧಿಕಾರಿಗಳಾಗಿದ್ದಾರೆ ಎಂದು ಎಸಿಬಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಹೆರಿಗೆ ರಜೆ ಮುಗಿಸಿ ಮರಳಿ ಶಾಲೆಗೆ ಕರ್ತವ್ಯಕ್ಕೆ ಹಾಜರು ಆಗಲು ಶಿಕ್ಷಕಿಯಿಂದ ಲಂಚ ಪಡೆಯುವಾಗ ಅರೆಸ್ಟ್  ಆಗಿದ್ದಾರೆ.



ಶಿಕ್ಷಕಿಯಿಂದ 5 ಸಾವಿರ ರೂಪಾಯಿ ಲಂಚ ಪಡೆದ ಎಸ್ ಡಿ ಎ ಶಶಿಕಾಂತ್ ಅವರು ಆ ಹಣ ವನ್ನು ಕಲಬುರಗಿ ನಗರದ ಲಕ್ಷ್ಮಿ ನಾರಾಯಣ ನಗರದ ಬಿ.ಇ ಓ ಮನೆಯಲ್ಲಿ

ಪರಮೇಶ್ ಗೆ ನೀಡಿದ್ದಾರೆ. ಹೀಗಾಗಿ ಎಸಿಬಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಜರುಗಿಸಿದ್ದಾರೆ.

ಈ ಸಂದರ್ಭ ಮಿಂಚಿನ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಅವರಿಬ್ಬರನ್ನು ಲಂಚದ ಹಣ ಪಡೆಯುವಾಗ ಬಲೆಗೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *