ಧಾರವಾಡ prajakiran.com : ನಾಲ್ಕನೇ ದರ್ಜೆ ಗುತ್ತಿಗೆದಾರರ ಲೈಸನ್ಸ್ ಮಾಡಿಕೊಡಲು ಲಂಚದ ಬೇಡಿಕೆಯಿಟ್ಟಿದ್ದ ಪಂಚಾಯತ್ ರಾಜ್ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಒಬ್ಬರು ಎಸಿಬಿ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿರುವ ಘಟನೆ ಧಾರವಾಡದಲ್ಲಿ ಮಂಗಳವಾರ ನಡೆದಿದೆ.
ಧಾರವಾಡ ಎಸಿಬಿ ಡಿವೈಎಸ್ಪಿ ವೇಣುಗೋಪಾಲ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಅಧಿಕಾರಿಗಳು ಬಲೆಗೆ ಕೆಡವಿದ್ದಾರೆ.
ಕಲಘಟಗಿಯ ಕಲ್ಲಪ್ಪ ಶಿರಬಡಗಿ ಎಂಬುವರಿಗೆ ನಾಲ್ಕನೇ ದರ್ಜೆ ಗುತ್ತಿಗೆದಾರ ಪರವಾನಿಗೆ ಮಾಡಿಸಲು ಲಂಚದ ಬೇಡಿಕೆಯಿಟ್ಟಿದ್ದರಿಂದಅವರು ಹಲವು ಬಾರಿ ಅಲೆದಾಡಿ ಬೇಸತ್ತಿದ್ದರು.
ಇದರಿಂದ ನೊಂದ ಗುತ್ತಿಗೆದಾರ ಭ್ರಷ್ಟಾಚಾರ ನಿಗ್ರಹ ದಳದ ಮೊರೆ ಹೋಗಿದ್ದರು. ಅವರು ನೀಡಿದ ದೂರಿನ ಆಧಾರದ ಮೇಲೆ ಲಂಚ ಪಡೆಯುತ್ತಿದ್ದಾಗ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೋಹರ ಮಾಂಡೋಲಿಕರ ಕೊನೆಗು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಇವರ ವಿರುದ್ದ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಅವರನ್ನು ವಶಕ್ಕೆ ಪಡೆದಿರುವ ಎಸಿಬಿ ವಿಚಾರಣೆ ಮುಂದುವರೆಸಿದ್ದಾರೆ.