ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕೆಐಎಡಿಬಿ ನಿವೇಶನ ಹಂಚಿಕೆಯಲ್ಲಿ ಅನ್ಯಾಯ ಮಾಡಿರೋ ದೂರು ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಧಾರವಾಡದ ನವಲೂರ ಬಳಿ ಇರುವ ಕೆಐಎಡಿಬಿ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳು ಹಲವು ಗಂಟೆಗಳಿಂದ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
ಕಾನೂನು ಪ್ರಕಾರ ನಿವೇಶನ ಹಂಚಿಕೆಯಾದವರನ್ನು ಬಿಟ್ಟು ಬೇರೆಯವರೆಗೆ ನೀಡಿರುವ ಆರೋಪದ ಜೊತೆಗೆ ಭೂಮಿಕಳೆದುಕೊಂಡವರಿಗೆ ಪರಿಹಾರ ನೀಡುವಲ್ಲಿ ಮೀನಾಮೇಷ ಆರೋಪವಿದೆ.
ಎಸಿಬಿ ಎಸ್ಪಿ ನ್ಯಾಮಗೌಡ, ಡಿವೈಎಸ್ಪಿ ಪಿ. ವೇಣುಗೋಪಾಲ ನೇತೃತ್ವದಲ್ಲಿ ಪರಿಶೀಲನೆ ಕಾರ್ಯ ನಡೆಯುತ್ತಿದೆ.
ಧಾರವಾಡದ ಎರಡು ಸಂಘಟನೆಗಳ ಮುಖಂಡರು ಪ್ರತ್ಯೇಕವಾಗಿ ಈ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.