ಧಾರವಾಡ Prajakiran.com : ವಯಸ್ಸಾದ ಅಜ್ಜನ ಕಾಲಿನ ಮೇಲೆ ಲಾರಿಯೊಂದು ಹಾಯ್ದ ಘಟನೆ ಧಾರವಾಡದ ಶಿವಾಜಿ ಸರ್ಕಲ್ ಬಳಿ ಬುಧವಾರ ನಡೆದಿದೆ.
ಅಜ್ಜನ ಕಾಲಿನ ಮೇಲೆ ಲಾರಿಯ ಚಕ್ರ ಹಾಯ್ದು ಪರಿಣಾಮ ಅಜ್ಜನ ಕಾಲಿಗೆ ಗಂಭೀರವಾದ ಗಾಯವಾಗಿದೆ.
ಈ ಹಿನ್ನೆಲೆಯಲ್ಲಿ ಅಜ್ಜನನ್ನು ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
ಘಟನಾ ಸ್ಥಳಕ್ಕೆ ಧಾರವಾಡ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆ ಕುರಿತು ಮಾಹಿತಿ ಕಲೆ ಹಾಕಿ ಲಾರಿ ಚಾಲಕನನ್ನು ವಿಚಾರಣೆ ನಡೆಸಿದ್ದಾರೆ.