ಧಾರವಾಡ prajakiran.com :
ಬೆಂಜ್ ಕಾರ ಮತ್ತು ಕೆಟಿಎಂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒಬ್ಬ ಸಾವನ್ನಪ್ಪಿದ ಘಟನೆ ಭಾನುವಾರ ಧಾರವಾಡದ ಮರೆವಾಡ ಕ್ರಾಸ್ ಬಳಿ ನಡೆದಿದೆ.
ವೇಗವಾಗಿ ಹೋಗುತ್ತಿದ್ದ ಬೈಕಿಗೆ ಬೆಂಜ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವಿಗೀಡಾಗಿದ್ದಾನೆ ಎನ್ನಲಾಗಿದೆ.
ಮೃತ ಯುವಕನನ್ನ ಧಾರವಾಡದ ಸಾರಸ್ವತಪುರಪುರದವ ಎಂದು ಗುರುತಿಸಲಾಗಿದೆ.
ಅಪಘಾತದಿಂದಾಗಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಬೈಕ್ ಜಖಂಗೊಂಡಿದೆ.
ಈ ಕುರಿತು ಮಾಹಿತಿ ಅರಿತು
ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಮುಂದಿನ ಕಾನೂನು ಕ್ರಮವನ್ನು ಜರುಗಿಸಿದ್ದಾರೆ.