ಧಾರವಾಡ prajakiran.com :
ಕಳೆದ ರಾತ್ರಿ ಧಾರವಾಡದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ
ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ.
ಧಾರವಾಡದ ಹೊಸ ಬಸ್ ಸ್ಟ್ಯಾಂಡ್ ಬಳಿ ಬಸ್ ಹಾಗೂ ಕಾರ್ ನಡುವೆ ನಡೆದ ಅಪಘಾತದಲ್ಲಿ ಈ ದುರಂತ ನಡೆದಿದೆ.
ಗರಗದ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳಾಗಿದ್ದ
ಡಾ.ಆರ್.ಎನ್.ಪತ್ತಾರ ಅವರು ಕಾರ್ ಚಾಲನೆ ಮಾಡಿಕೊಂಡು ಬರುವಾಗ ಬಸ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ಡಾಕ್ಟರ್ ಆರ್ ಎನ್ ಪತ್ತಾರ
ಅವರ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ.