ಹುಬ್ಬಳ್ಳಿ prajakiran.com : ಕಾರು ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಬಲಿಯಾದ ಘಟನೆ ಹುಬ್ಬಳ್ಳಿ ಸಮೀಪ ಬುಧವಾರ ನಡೆದಿದೆ.
ಗದಗ ಹುಬ್ಬಳ್ಳಿ ರಸ್ತೆಯ ಅಣ್ಣಿಗೇರಿ ಪಟ್ಟಣದ ಬಳಿಯ ಕೊಂಡಿಕೊಪ್ಪ ಕ್ರಾಸ್ ಬಳಿ ಈ ರ್ದು ಘಟನೆ ಸಂಭವಿಸಿದೆ.
ಹೀಗಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರು.
ಸಣ್ಣಗಂಗಣ್ಣ , ನಾಗಮ್ಮ ,
ಹನುಮಂತು ಹಾಗೂ ಈರಣ್ಣಾ ಸ್ಥಳದಲ್ಲೇ ಮೃತಪಟ್ಟರು.
ಸಣ್ಣೀರಣ್ಣ ಮತ್ತು ಲಕ್ಷ್ಮೀ ಗಾಯಗೊಂಡಿದ್ದಾರೆ.
ಕ್ರೂಸರ್ ನ ಚಾಲಕ ಮಲ್ಲಪ್ಪ ಗಿಡ್ಡನ್ನವರ ತೀವ್ರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಆಗಿದ್ದಾರೆ.
ಮೃತರು ರಾಯಚೂರು ಜಿಲ್ಲೆಯ ಮಾನ್ವಿಯ ವಿಠ್ಠಲ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ.
ಮಾನ್ವಿಯಿಂದ ಕಾರವಾರದ ಹಲಗಾ ಗೆ ಪಾರ್ಶ್ವವಾಯು ಚಿಕಿತ್ಸೆಗೆ ಹೊರಟಿದ್ದರು ಎಂದು ಹೇಳಲಾಗಿದೆ.
ಅಪಘಾತ ನಡೆದ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ
ನಡೆಸಿದರು. ಅಲ್ಲದೆ ಈ ಕುರಿತು
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.