ಧಾರವಾಡ prajakiran.com : ಬಿಆರ್ ಟಿ ಎಸ್ ಬ್ಯಾರಿಕೇಡ್ ಗೆ ಡಿಕ್ಕಿಹೊಡೆದ ಪರಿಣಾಮ ಒಬ್ಬ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ.
ಇಲ್ಲಿಯ ರಾಯಪುರದ ಐ ಓ ಸಿ ಬಳಿ ನಿನ್ನೇ ರಾತ್ರಿ ಯುವಕನೊಬ್ಬ ಪಲ್ಸರ್ ಬೈಕ್ ನಲ್ಲಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ.
ಬೈಕ್ ಸವಾರನ ಜೊತೆಗೆ ಇದ್ದ ಇನ್ನೊಬ್ಬ ಯುವಕ ಗಂಭೀರವಾಗಿ ಗಾಯಗೊಂಡ ಪರಿಣಾಮವಾಗಿ ಆತನ ಸ್ಥಿತಿ ಚಿಂತಾಜನಕವಾಗಿದೆ.
ಆತನನ್ನು ತಕ್ಷಣ ಸಮೀಪದ ಧಾರವಾಡದ ಎಸ್ ಡಿಎಂ ಆಸ್ಪತ್ರೆ ಗೆ ಹೆಚ್ಚಿನ ಚಿಕಿತ್ಸೆ ಗಾಗಿ ದಾಖಲಿಸಲಾಗಿದೆ ಎಂದು ಧಾರವಾಡ ಸಂಚಾರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಮುರುಗೇಶ ಚನ್ನಣ್ಣವರಅವರು ಪ್ರಜಾಕಿರಣಕ್ಕೆ ತಿಳಿಸಿದ್ದಾರೆ.
ಪ್ರೀತಂ ಉರ್ಪ್ ಪದ್ಮರಾಜ್ ಸಾವನ್ನಪ್ಪಿದ್ದ ಯುವಕನಾಗಿದ್ದಾನೆ. ಗಾಯಾಳುವನ್ನು ಚಿರಾಗ್ ಜೈನ್ ಎಂದು ಗುರುತಿಸಲಾಗಿದೆ.
ಪ್ರೀತಂ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಪೋಷಕರಿಗೆ ಹಸ್ತಾಂತರಿಸಲಾಗಿದೆ.
ಈ ಕುರಿತು ಧಾರವಾಡ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.