ಚಾಮರಾಜನಗರ prajakiran.com : ಟಿ.ಟಿ ವಾಹನವೊಂದು ಅಪಘಾತಕ್ಕೆ ಈಡಾದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಚಾಮರಾಜನಗರ ತಾಲ್ಲೂಕಿನ ಸುವರ್ಣವತಿ ಸಮೀಪ ನಡೆದಿದೆ.
೧೪ ಜನರು ಇದ್ದ ವಾಹನವು ಬೆಳಗಿನ ಜಾವ ೪.೩೦ರ ಸಮಯದಲ್ಲಿ ಅಪಘಾತ ಸಂಭವಿಸಿದೆ.
ತಮಿಳುನಾಡಿನ ತಿರುಪುರಿ ನಿಂದ ಮೈಸೂರಿಗೆ ಬರುತ್ತಿದ್ದ ವಾಹನ ಇದಾಗಿದೆ.
ಅಪಘಾತದಲ್ಲಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದರು ಎಂದು ತಿಳಿದುಬಂದಿದೆ.
ಇನ್ನು ಉಳಿದ ಪ್ರಯಾಣಿಕರನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಕುರಿತು ಚಾಮರಾಜನಗರ
ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.