ಅಪರಾಧ

ಧಾರವಾಡದಲ್ಲಿ ರಸ್ತೆ ಅಪಘಾತ : ಇಬ್ಬರು ಸವಾರರು ಸ್ಥಳದಲ್ಲಿಯೇ ಸಾವು

ಧಾರವಾಡ prajakiran.com : ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಧಾರವಾಡದ ಹೊಯ್ಸಳ ನಗರದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.

ಸಾವನ್ನಪ್ಪಿದ ಬೈಕ್ ಸವಾರರ ದೇಹಗಳು ಛಿದ್ರ ಛಿದ್ರಗೊಂಡಿದು,ಬೈಕ್ ಮೇಲೆ ಹೊರಟಿದ್ದ ಬೈಕ್ ಸವಾರರಿಗೆ ವಾಹನವೊಂದು ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರರ ದೇಹಗಳು ಛಿದ್ರವಾದ ಪರಿಣಾಮ ಅವರ ಗುರುತು ಕೂಡ ಸಿಗದ ಸ್ಥಿತಿಯಲ್ಲಿ ದೇಹದ ಭಾಗಗಳು ಚೆಲ್ಲಾಪಿಲ್ಲಿಯಾಗಿವೆ.

ಸಾವಿಗೀಡಾದ ಇಬ್ಬರು ಧಾರವಾಡ ತಾಲೂಕಿನ ನಿಗದಿ ಗ್ರಾಮದವರು ಎಂದು ತಿಳಿದುಬಂದಿದೆ.

ಅಪಘಾತ ನಡೆದ ತಕ್ಷಣವೇ ವಾಹನ ಸವಾರ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ  ಧಾರವಾಡ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ದೇಹದ ಭಾಗಗಳನ್ನು ಆಯ್ದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಈ ಕುರಿತು ದೂರು ದಾಖಲಿಸಿಕೊಂಡು ಪರಾರಿಯಾಗಿರುವ ವಾಹನದ ಪತ್ತೆಗಾಗಿ ಧಾರವಾಡ ಸಂಚಾರ ಠಾಣೆಯ ಪೊಲೀಸರು ಬಲೆ ಬೀಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *