ಧಾರವಾಡ ಪ್ರಜಾಕಿರಣ.ಕಾಮ್ : ಕಾರನ್ನು ಓವರ್ಟೇಕ್ ಮಾಡಲು ಹೋದ ಬೈಕ್ ವೊಂದು ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಕರಣದಲ್ಲಿ ಮೂವರು ಸಾವಿಗೀಡಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಈ ಘಟನೆಯಲ್ಲಿ ಸಾವಿಗೀಡಾದವರನ್ನ ನವಲಗುಂದ ತಾಲೂಕಿನ ಹೆಬ್ಬಾಳ ಗ್ರಾಮದ ಬಸವರಾಜ ಕುರಟ್ಟಿ, ಯಲ್ಲಪ್ಪ ಘಂಟಿ ಹಾಗೂ ಧಾರವಾಡದ ಗೊಲ್ಲರ ಕಾಲನಿ ನಿವಾಸಿ ಎಂದು ಗುರುತಿಸಲಾಗಿದೆ.
ಈ ಅಪಘಾತದಲ್ಲಿ ಒಟ್ಟು ಹದಿಮೂರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕ್ರೂಸರ್ ವಾಹನದಲ್ಲಿ ಇಪ್ಪತ್ತಕ್ಕೂ ಹೆಚ್ಚು ಕಾರ್ಮಿಕರನ್ನ ಧಾರವಾಡದಿಂದ ಹನಸಿಯತ್ತ ಕರೆದುಕೊಂಡು ಹೋಗಲಾಗುತ್ತಿತ್ತು.
ಆಗ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್ ಪಟ್ಟಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ತಕ್ಷಣ ಗಾಯಾಳುಗಳನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ಹಾಗೂ ಹುಬ್ಬಳಿಯ ಕಿಮ್ಸಗೆ ರವಾನೆ ಮಾಡಲಾಗಿದೆ.
ಧಾರವಾಡ ಜಿಲ್ಲಾಸ್ಪತ್ರೆಗೆ ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ , ಜಿಲ್ಲಾ ಪೊಲೀಸ್ ಅಧೀಕ್ಷಕ ಗೋಪಾಲ ಬ್ಯಾಕೋಡ ಭೇಟಿ ನೀಡಿ, ಅಪಘಾತ ಕುರಿತು ಮಾಹಿತಿ ಪಡೆದರು.
ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆದಿದೆ.