ಧಾರವಾಡ prajakiran.com : ಬೈಕ್ ಸವಾರ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದ ಹಿನ್ನಲೆಯಲ್ಲಿ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಶಿಂಗನಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಡಿವಾಳೆಪ್ಪ ಬಸಪ್ಪ ಪೂಜಾರ, ಮಹದೇವ ಸಹದೇವಪ್ಪ ಲಕ್ಕಣ್ಣನವರ ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.
ಇವರು ಧಾರವಾಡ ತಾಲೂಕಿನ ಬೇಲೂರ ಗ್ರಾಮದವರು ಎಂದು ಗೊತ್ತಾಗಿದೆ.
ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಾಹಿತಿ ಅರಿತ ಗರಗ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.