ಧಾರವಾಡ prajakiran com : ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಪ್ರಕರಣ ಇಲ್ಲಿನ ಕೆ.ಸಿ.ಪಾರ್ಕ ಸಮೀಪದಲ್ಲಿ ನಿನ್ನೆ ರಾತ್ರಿ ನಡೆದಿದೆ.
ನಗರದ ಸೈದಾಪುರದ ಮಜ್ಜೀನ್ ಅಜ್ಜಮ್ಮನವರ (೧೯) ಜನ್ನತನಗರದ ಪರ್ಹಾನ್ ಸಂಗ್ರೇಶಕೊಪ್ಪ (೨೧) ಮೃತಪಟ್ಟವರು.
ರಾತ್ರಿ ಸುಮಾರು ೧೧ ಗಂಟೆ ಸುಮಾರಿಗೆ ವೇಗವಾಗಿ ಬೈಕ್ ಚಲಾಯಿಸುತ್ತಿದ್ದ ಇಬ್ಬರು ಯುವಕರು ಮೊದಲು ಕಾರಿಗೆ ಡಿಕ್ಕಿ ಹೊಡೆದು, ಅದರಿಂದ ತಪ್ಪಿಸಿಕೊಳ್ಳಲು ಹೋಗಿ ಡಿವೈಡರ್ಗೆ ಬಡಿದು ತೀವ್ರವಾಗಿ ಗಾಯಗೊಂಡ ಪರಿಣಾಮ ಇಬ್ಬರೂ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.