ಅಪರಾಧ

ಧಾರವಾಡದಲ್ಲಿ ರಸ್ತೆ ಅಪಘಾತ : ಇಬ್ಬರು ಯುವಕರ ದುರ್ಮರಣ

ಧಾರವಾಡ prajakiran com : ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಪ್ರಕರಣ ಇಲ್ಲಿನ ಕೆ.ಸಿ.ಪಾರ್ಕ ಸಮೀಪದಲ್ಲಿ ನಿನ್ನೆ ರಾತ್ರಿ ನಡೆದಿದೆ.

ನಗರದ ಸೈದಾಪುರದ ಮಜ್ಜೀನ್ ಅಜ್ಜಮ್ಮನವರ (೧೯) ಜನ್ನತನಗರದ ಪರ್ಹಾನ್ ಸಂಗ್ರೇಶಕೊಪ್ಪ (೨೧) ಮೃತಪಟ್ಟವರು.

ರಾತ್ರಿ ಸುಮಾರು ೧೧ ಗಂಟೆ ಸುಮಾರಿಗೆ ವೇಗವಾಗಿ ಬೈಕ್ ಚಲಾಯಿಸುತ್ತಿದ್ದ ಇಬ್ಬರು ಯುವಕರು ಮೊದಲು ಕಾರಿಗೆ ಡಿಕ್ಕಿ ಹೊಡೆದು, ಅದರಿಂದ ತಪ್ಪಿಸಿಕೊಳ್ಳಲು ಹೋಗಿ ಡಿವೈಡರ್‌ಗೆ ಬಡಿದು ತೀವ್ರವಾಗಿ ಗಾಯಗೊಂಡ ಪರಿಣಾಮ ಇಬ್ಬರೂ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *