ಅಪರಾಧ

ಧಾರವಾಡದ ಹಾರೋಬೆಳವಡಿ ಬಳಿ ಭೀಕರ ಅಪಘಾತ : ಇಬ್ಬರ ಸಾವು, ಒಬ್ಬನ ಸ್ಥಿತಿ ಗಂಭೀರ

ಧಾರವಾಡ prajakiran.com ಏ.29 : ಲಾರಿ- ಲಾರಿಯ ನಡುವೆ ಶುಕ್ರವಾರ ಬೆಳಗಿನ ಜಾವ ನಡೆದಿರುವ ಭೀಕರ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿ, ಮತ್ತೋರ್ವನ ಸ್ಥಿತಿ ಚಿಂತಾಜನಕವಾದ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ಸಂಭವಿಸಿದೆ.

ಧಾರವಾಡದಿಂದ ಸವದತ್ತಿಗೆ ಹೋಗುತ್ತಿದ್ದ ಲಾರಿಗೆ ಎದುರಿಗೆ ಬಂದ ಲಾರಿಯು ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಚಾಲಕರು ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ.

ಎರಡು ಲಾರಿಗಳ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕರ ಶವಗಳು ಲಾರಿಯಲ್ಲಿ ಸಿಲುಕಿವೆ.

ಮೃತಪಟ್ಟವ ಒಬ್ಬ ವಿ ಆರ್ ಎಲ್ ಚಾಲಕ ಸವದತ್ತಿಯ ಉಳ್ಳಿಗೇರಿಯವ ನೆಂದು ಎಂದು ತಿಳಿದು ಬಂದಿದೆ.

ಇನ್ನೊಬ್ಬ ಲಾರಿ ಚಾಲಕನ ಮಾಹಿತಿ ಲಭ್ಯವಾಗಿಲ್ಲ. ಘಟನೆಯಿಂದ ಧಾರವಾಡ ಸವದತ್ತಿ ರಸ್ತೆ ಸಂಪೂರ್ಣವಾಗಿ ಎರಡು ಗಂಟೆಗಳ ಕಾಲ ಬಂದ್ ಆಗಿತ್ತು.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಸ್ತೆಯಲ್ಲಿ ಬಿದ್ದಿರುವ ಲಾರಿಯನ್ನ ತೆಗೆದು ಸಂಚಾರ ಸುಗಮ ಗೂಳಿಸಲು ಹರ ಸಾಹಸ ಪಟ್ಟರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *