ಧಾರವಾಡ ಪ್ರಜಾಕಿರಣ.ಕಾಮ್ : ಲಾರಿ ಮತ್ತು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಇಟಿಗಟ್ಟಿ ಬಳಿ ಹು-ಧಾ ಬೈಪಾಸ್ ರಸ್ತೆಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಧಾರವಾಡ ಲಕ್ಷ್ಮೀ ಸಿಂಗನಕೇರಿ ನಿವಾಸಿಗಳಾದ ಭೀಮರಾವ ಶಂಕರ ಗೋಸಾವಿ (38) ಮತ್ತು ಏಕನಾಥ ರಡ್ಡಿ ಗೋಸಾವಿ (42) ಮೃತಪಟ್ಟವರು.
ಬೆಳಗ್ಗೆ ಧಾರವಾಡ ಕಡೆಯಿಂದ ಹುಬ್ಬಳ್ಳಿಯತ್ತ ಇಬ್ಬರೂ ಬೈಕ್ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ ಎಂದು ಗೊತ್ತಾಗಿದೆ.
ಸಿಪಿಐ ಪಂಚಯ್ಯ ಸಾಲಿಮಠ, ಪಿಎಸ್ ಐ ಎಚ್.ಡಿ.ಯರಝರವಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.