ಧಾರವಾಡ Prajakiran.com : ಧಾರವಾಡ ನಗರದಾದ್ಯಂತ ಸಂಚಾರಿ ಪೊಲೀಸ್ ಠಾಣೆ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ರ್ಯಾಲಿ ಕಾರ್ಯಕ್ರಮಕ್ಕೆ ಧಾರವಾಡ ಸಹಾಯಕ ಪೊಲೀಸ್ ಆಯುಕ್ತೆ ಅನುಷಾ ಜಿ. ಚಾಲನೆ ನೀಡಿದರು.
ನಗರದ ಕಾರ್ಪೋರೇಷನ್ ಸರ್ಕಲ್ ನಿಂದ ಪ್ರಾರಂಭವಾದ ರಾಷ್ಟ್ರೀಯ ಸುರಕ್ಷತಾ ಸಪ್ತಾಹ ರ್ಯಾಲಿಯಲ್ಲಿ ಶಾಲಾ ಮಕ್ಕಳು ಹಾಗೂ ಸಂಚಾರಿ ಪೋಲಿಸ್ ಠಾಣೆ ಸಿಬ್ಬಂದಿಗಳು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದರು.
ಧಾರವಾಡ ನಗರದ ಬಸ್ ನಿಲ್ದಾಣ, ಕೆಸಿಸಿ ಬ್ಯಾಂಕ್ ಸರ್ಕಲ್ ವರೆಗೆ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.
ರ್ಯಾಲಿಯಲ್ಲಿ ಸಂಚಾರಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಲ್ಲನಗೌಡ ನಾಯಕ, ನಗರ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿಗಳು ಸಾರ್ವಜನಿಕರಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ರ್ಯಾಲಿ ಕುರಿತು ಜಾಗೃತಿ ಮೂಡಿಸಿದರು.