ಬೆಂಗಳೂರು Prajakiran.com : ರಾಜ್ಯದಲ್ಲಿ ಪ್ರಾಣಿ ಹಿಂಸೆಯಲ್ಲಿ ತೋಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ತಿಳಿಸಿದರು.
ಗುರುವಾರ ವಿಕಾಸ ಸೌಧ ಕೊಠಡಿ ಸಂಖ್ಯೆ ೩೧೮ ರಲ್ಲಿ ನಡೆದ ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿಯ ಪ್ರಥಮ ಸಭೆಯಲ್ಲಿ ಈ ಕುರಿತು ಗಂಭೀರವಾಗಿ ಚರ್ಚೆ ನಡೆಸಿದ ಬಳಿಕ ಈ ವಿಷಯ ಪ್ರಕಟಿಸಿದರು.
ಈ ಸಭೆಯಲ್ಲಿ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಇದೆ ವೇಳೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರನ್ನು ಮಂಡಳಿ ಸದಸ್ಯ ಹುಣಚಿರಾಯ (ಕೇಶವ) ಮೋಟಗಿ ಸಮ್ಮುಖದಲ್ಲಿ ಅಭಿನಂದಿಸಲಾಯಿತು.
ಈ ಸಭೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪ್ರಾಣಿ ಕಲ್ಯಾಣ ಮತ್ತು ಪ್ರಾಣಿ ಹಿಂಸೆ, ದೌರ್ಜನ್ಯ ತಡೆ ಕಾಯ್ದೆ ಸಮಪ೯ಕವಾಗಿ ಜಾರಿ ಮಾಡುವ ಕುರಿತು ಪರಿಶೀಲಿಸಲಾಯಿತು.
ರಾಜ್ಯದಲ್ಲಿ ಅನಧಿಕೃತವಾಗಿ, ಬೇಕಾಬಿಟ್ಟಿಯಾಗಿ ಪ್ರಾಣಿ ವಧೆ ನಡೆಸುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಿ ಶಿಕ್ಷೆ ಗೆ ಒಳಪಡಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ಅಲ್ಲದೆ, ಸಾಕಷ್ಟು ಪ್ರಮಾಣದಲ್ಲಿ ಪ್ರಾಣಿ ಚಟುವಟಿಕೆ ಕುರಿತು ಚರ್ಚಿಸಲಾಯಿತು