ರಾಜ್ಯ

ಧಾರವಾಡ ಶಾಸಕ ಅರವಿಂದ ಬೆಲ್ಲದ್ ಗೆ ಕಿವಿಮಾತು ಹೇಳಿದ ನವಲಗುಂದ ಶಾಸಕ ಮುನೇನಕೊಪ್ಪ…..!

ಹುಬ್ಬಳ್ಳಿ prajakiran.com : ರಾಜ್ಯದ ನಾಯಕತ್ವ ಬದಲಾವಣೆಗೆ ಮುಂದಾಗಿರುವ ಹಾಗೂ ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟು ಹಲವರ ಕೆಂಗೆಣ್ಣಿಗೆ ಗುರಿಯಾಗಿರುವ  ಧಾರವಾಡ ಶಾಸಕ ಅರವಿಂದ ಬೆಲ್ಲದಗೆ ನವಲಗುಂದ ಬಿಜೆಪಿ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ ಕಿವಿಮಾತು  ಹೇಳಿದ್ದಾರೆ.

ಹೌದು ಇದು ಅಚ್ಚರಿಯಾದ್ರೂ ಸತ್ಯ ಅರವಿಂದ ಇನ್ನು ರಾಜಕೀಯದಲ್ಲಿ ಪಳಗಬೇಕಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಜೊತೆಗೆ ಮುಂದೆ ಸಾಕಷ್ಟು ಅವಕಾಶ ಸಿಗುತ್ತದೆ, ಈಗಲೇ ಆತುರ ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ.

ಇನ್ನು ರಾಜ್ಯದ ಬಿಜೆಪಿ ನಾಯಕತ್ವ ಬದಲಾವಣೆ ಬಗ್ಗೆ ನಮ್ಮ ಜೊತೆಗೆ ಶಾಸಕ ಅರವಿಂದ ಬೆಲ್ಲದ ಯಾವುದೇ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟನೆ ನೀಡಿದರು.

ನಮ್ಮದು ಶಿಸ್ತಿನ ಪಕ್ಷ. ಪಕ್ಷ ಯಾವ ರೀತಿಯಾಗಿ ಹೇಳುತ್ತದೆ. ಅದೇ ರೀತಿಯಾಗಿ ನಾವು ಕೆಲಸವನ್ನು ಮಾಡಬೇಕಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಮುಂದಾಗಿರುವ ಶಾಸಕ ಅರವಿಂದ ಬೆಲ್ಲದ ನಡೆ ಒಂದೆಡೆಯಾದರೆ ಧಾರವಾಡ ಜಿಲ್ಲೆಯ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ನಡೆ ಮುಖ್ಯಮಂತ್ರಿ ಯಡಿಯೂರಪ್ಪ ಕಡೆ ಇದೆ.

ಯಡಿಯೂರಪ್ಪ ನವರೆ ನಮ್ಮ ನಾಯಕ. ನಮ್ಮ ಬೆಂಬಲ ಯಡಿಯೂರಪ್ಪ ನವರಿಗೆ ಇದೆ ಎಂದು ಶಂಕರ ಮುನೇನಕೊಪ್ಪ ಅಚ್ಚರಿ ಮೂಡಿಸಿದರು.

ಅಲ್ಲದೆ, ಮುಂದಿನ ಎರಡು ವರ್ಷಗಳ ಕಾಲ ಯಡಿಯೂರಪ್ಪ ನವರೇ ಮುಖ್ಯಮಂತ್ರಿ ಯಾಗಿರಲಿದ್ದಾರೆ ಎಂದು ಮುನೇನಕೊಪ್ಪ ವಿವರಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *