ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಮತ್ತೆರಡು ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿ ನೀತಿಶ್ ಪಾಟೀಲ ತಿಳಿಸಿದರು.
ಅವರು ಸೋಮವಾರ ನಗರದಲ್ಲಿ ಮಕ್ಕಳ ಲಸಿಕಾ ಅಭಿಯಾನ ಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು.
53 ವರ್ಷದ ಮಹಿಳೆ ಹಾಗೂ 14 ವರ್ಷದ ಬಾಲಕಿಗೆ ತಮ್ಮ ಓಮಿಕ್ರಾನ್ ಹರಡಿದೆ. ಇಬ್ಬರು ಮನೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರಿಗೂ ಸೊಂಕಿನ ಪ್ರಮಾಣ ಕಡಿಮೆ ಇದೆ.
ಗುಣಮುಖರಾಗಿದ್ದರೂ ನೆಗೆಟಿವ್ ವರದಿ ಬರುವರೆಗೆ ಮನೆಯಲ್ಲಿ ಇದ್ದು ಚಿಕಿತ್ಸೆ ಪಡೆಯಲಿದ್ದಾರೆ.
ಹೀಗಾಗಿ ಧಾರವಾಡ ಜಿಲ್ಲೆಯ ಜನತೆ ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ನೀತಿಶ್ ಪಾಟೀಲ ಅಭಯ ನೀಡಿದರು.
ರಾಜ್ಯದಲ್ಲಿ ಪಾಸಿಟಿವ್ ಸಂಖ್ಯೆ ಹೆಚ್ಚಳವಾದ ಬೆನ್ನಲ್ಲೇ ಧಾರವಾಡ ಜಿಲ್ಲೆಯಲ್ಲಿ ಕೂಡ ನಿಧಾನವಾಗಿ ರೋಗಿಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ.
ಹೀಗಾಗಿ ಜಿಲ್ಲೆಯ ಜನತೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಮೈಮರೆತರೆ ಆತಂಕ ಕಟ್ಟಿಟ್ಟ ಬುತ್ತಿಯಾಗಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೇಶ್ ಬಳಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯಾಕ್ಸಿನ್ ಪಡೆದರೆ ಕರೋನಾ ಹರಡಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.