ಮುಂಬೈ prajakiran.com : ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುವ ಬಾಲಿವುಡ್ ನಟ ಅಕ್ಷಯ್ ಕುಮಾರ್, ಇದೀಗ ಶಾಲೆ ಕಟ್ಟಿಸಲು 1 ಕೋಟಿ ರೂ. ನೆರವು ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಲೈನ್ ಆಫ್ ಕಂಟ್ರೋಲ್ನಲ್ಲಿರುವ ತುಲೈಲ್ ಕಣಿವೆಯ ನೀರು ಗ್ರಾಮದಲ್ಲಿ ಶಾಲೆ ನಿರ್ಮಿಸಲು ನಟ ಅಕ್ಷಯ್ ಕುಮಾರ್ 1 ಕೋಟಿ ನೀಡಿದ್ದಾರೆ.
ಬಿಎಸ್ಎಫ್ ನ ವೀರ ಯೋಧರಿಗೆ ಗೌರವ ನಮನ ಸಲ್ಲಿಸುವ ಸಲುವಾಗಿ ಬಂಡಿಪೋರಾ ಜಿಲ್ಲೆಯ ತುಲೈಲ್ ಕಣಿವೆಯ ನೀರು ಗ್ರಾಮಕ್ಕೆ ಅಕ್ಷಯ್ ಕುಮಾರ್ ಭೇಟಿ ನೀಡಿದ್ದರು.
ಈ ವೇಳೆ ನೀರು ಗ್ರಾಮದಲ್ಲಿ ಶಾಲೆ ನಿರ್ಮಾಣಕ್ಕೆ ಹಣ ಸಹಾಯ ಮಾಡುವುದಾಗಿ ಅಕ್ಷಯ್ ಕುಮಾರ್ ತಿಳಿಸಿದ್ದಾರೆ.
ಈ ಶಾಲೆಗೆ ಅಕ್ಷಯ್ ಕುಮಾರ್ ತಂದೆ ‘ಹರಿ ಓಂ’ ಅವರ ಹೆಸರನ್ನಿಡಲು ತೀರ್ಮಾನಿಸಲಾಗಿದೆ.