ನವದೆಹಲಿ prajakiran.com : ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಕಾಶ್ಮೀರದ ಮುಂದಿನ ಯೋಜನೆಗಳ ಬಗ್ಗೆ ಚರ್ಚಿಸಲು ಗುರುವಾರ ಪ್ರಧಾನಿ ನರೇಂದ್ರ ಮೋದಿಯವರ ಸಭೆ ಭಾರೀ ನಿರೀಕ್ಷೆ ಹಾಗೂ ತೀವ್ರವಾದ ಕುತೂಹಲ ಮೂಡಿಸಿದೆ.
ಕಣಿವೆ ರಾಜ್ಯದ ನಾಲ್ವರು ಮಾಜಿ ಮುಖ್ಯಮಂತ್ರಿಗಳು, ವಿವಿಧ ಪಕ್ಷದ ನಾಯಕರೊಂದಿಗೆ ಈ ಮಹತ್ವದಸಭೆ ನಡೆಯಲಿದೆ.
ಇಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗಳನ್ನು ನಡೆಸುವುದು, ರಾಜಕೀಯ ಪ್ರಕ್ರಿಯೆಗಳನ್ನು ಬಲಪಡಿಸುವ ಕುರಿತು ಚರ್ಚಿಸಲಾಗುವುದು.
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಯಾದ ಫಾರೂಕ್ ಅಬ್ದುಲ್ಲಾ ಈ ಸಭೆಯ ನೇತೃತ್ವ ವಹಿಸಲಿದ್ದು, ಇನ್ನುಳಿದ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ, ಗುಲಾಮ್ ನಬಿ ಆಜಾದ್ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.