ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ
ಹುಬ್ಬಳ್ಳಿ ಪ್ರಜಾಕಿರಣ.ಕಾಮ್ :ಇದೇ ಸೆಪ್ಟೆಂಬರ್ 18 ರಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದ ಪೂರ್ವಭಾವಿಯಾಗಿ ಸಪ್ಟೆಂಬರ್ 17 ರಂದು ಸಂಜೆ 4.30 ಕ್ಕೆ ಸರ್ವ ಪಕ್ಷಗಳ ನಾಯಕರ ಸಭೆಯನ್ನು ಕರೆಯಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣಗಳ ಖಾತೆ ಮೂಲಕ ಈ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವರು ವಿಶೇಷ ಅಧಿವೇಶನದ ಹಿನ್ನಲೆಯಲ್ಲಿ ಕರೆಯಲಾಗಿರುವ ಈ ಸರ್ವಪಕ್ಷ ಸಭೆಯ ಕುರಿತು ಎಲ್ಲಾ ಪಕ್ಷಗಳ ನಾಯಕರಿಗೂ ಈಗಾಗಲೇ ಈ-ಮೇಲ್ ಮೂಲಕ ಮಾಹಿತಿ ನೀಡಿ, ಆಮಂತ್ರಣ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಇಡೀ ದೇಶದ ಕುತೂಹಲ ಕೆರಳಿಸಿರುವ ವಿಶೇಷ ಅಧಿವೇಶನದ ಹಿನ್ನಲೆಯಲ್ಲಿ ನಡೆಯಲಿರುವ ಈ ಪೂರ್ವಭಾವಿ ಸಭೆಯತ್ತ ಸದ್ಯ ಎಲ್ಲರ ಚಿತ್ತ ನೆಟ್ಟಿದೆ.