ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಅವರು ಗುರುವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನ ಹೊಂದಿದರು.
ಶಿವಾನಂದ ಅಂಬಡಗಟ್ಟಿ ಅವರಿಗೆ 64 ವರ್ಷ ವಯಸ್ಸಾಗಿತ್ತು.
ಅವರಿಗೆ ಇಬ್ಬರು ಗಂಡು, ಒಬ್ಬ ಹೆಣ್ಣು ಮಗಳು ಸೇರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧುಬಳಗವಿದೆ.
1989 ರಿಂದ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದರು.
ಲೊಹಿತ್ ನಾಯ್ಕರ್ ವಿರುದ್ಧ ಪಕ್ಷೇತರವಾಗಿ ಆಯ್ಕೆಯಾಗಿ, ಎಸ.ಎಂ. ಕೃಷ್ಣಾ ಸರ್ಕಾರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
ಶಿವಾನಂದ ಅಂಬಡಗಟ್ಟಿ ಮಾಜಿ ಶಾಸಕ ಶ್ರೀಕಾಂತ ಅಂಬಡಗಟ್ಟಿ ಸಹೋದರರಾಗಿದ್ದಾರೆ.
ಗುರುವಾರ ಮಧ್ಯಾಹ್ನ 3 ಗಂಟೆಗೆ ಮೃತರ ಅಂತ್ಯಕ್ರಿಯೆ ಅಳ್ಳಾವರದ ರುದ್ರ ಭೂಮಿಯಲ್ಲಿ ನಡೆಯಲಿದೆ.
ಅಂಬಡಗಟ್ಟಿ ಅವರು
ಸಹೃದಯಿ, ಸಜ್ಜನ ರಾಜಕಾರಣಿ. ಸಮಾಜಮುಖಿ ಚಿಂತಕರಾಗಿದ್ದ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಘಟಕದ ಉಪಾಧ್ಯಕ್ಷರಾಗಿದ್ದರು. ಅವರ ನಿಧನಕ್ಕೆ ಜಿಲ್ಲೆಯ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.