ನವದೆಹಲಿ prajakiran.com : ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯ ಸಭಾ ಸದಸ್ಯರಾಗಿರುವ ಅಮರ್ ಸಿಂಗ್ (64) ಅವರು ವಿಧಿವಶರಾಗಿದ್ದಾರೆ.
ಅವರು ಕಳೇದ ಆರು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಕರೆದುಕೊಂಡು ಹೋಗಲಾಗಿತ್ತು.ಆದರೆ ಅವರು ಅಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಅವರು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಮ್ ಸಿಂಗ್ ಯಾದವರಅವರ ದೀರ್ಘ ಕಾಲದ ಒಡನಾಡಿಯಾಗಿದ್ದರು.
ಆನಂತರಅವರ ಜೊತೆಗೆ ಸಂಬಂಧ ಹಳಸಿತ್ತು. ಹೀಗಾಗಿ ಇಬ್ಬರು ಮುನಿಸಿಕೊಂಡಿದ್ದರು. ಅಲ್ಲದೆ, ಪಕ್ಷದೊಂದಿಗೆ ಸಂಬಂಧ ಕಳಚಿಕೊಂಡಿದ್ದರು.
ಆನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಇಬ್ಬರು ಒಂದಾಗಿದ್ದರು. ಉತ್ತರ ಪ್ರದೇಶದ ರಾಜಕಾರಣದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದಅಮರ್ ಸಿಂಗ್ ಅಗಲಿಕೆ ರಾಷ್ಟ್ರ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಅನೇಕರು ಕಂಬನಿ ಮಿಡಿದಿದ್ದಾರೆ.