ಜಿಲ್ಲೆ

ಸೂಕ್ತ ನಿರ್ವಹಣೆ ಇಲ್ಲದೆ ಸೊರಗುತ್ತಿರುವ ಅಂಬೇಡ್ಕರ್ ಭವನ

ಧಾರವಾಡ prajakiran.com : ಧಾರವಾಡದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಡಾ. ಬಿ.ಆರ್. ಅಂಬೇಡ್ಕರ್ ಭವನ ಕೋವಿಡ್ ಭೀತಿಯ ನಡುವೆ ಸೂಕ್ತ ನಿರ್ವಹಣೆ ಇಲ್ಲದೆ ಸೊರಗುತ್ತಿದೆ.

ಅಂಬೇಡ್ಕರ್ ಭವನ ಇದೀಗ ಕಸದ ತೊಟ್ಟಿಯಂತಾಗಿದ್ದು, ಎಲ್ಲಿ ನೋಡಿದರಲ್ಲಿ ಗಿಡ ಗಂಟಿಗಳು, ಕಸದ ರಾಶಿ, ನೆಲ ಹಾಸು ಮೇಲೂ ಸಹ ಹುಲ್ಲು ಬೆಳೆದಿದೆ. ಈ ಬಗ್ಗೆ ನಿರ್ವಹಣೆ ಮಾಡಬೇಕಾದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಜಾಣ ಕುರುಡುತನ ತೋರಿಸುತ್ತಿರುವುದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ.

ಅಲ್ಲದೆ, ಕಟ್ಟಡದ ನಿವೇಶನದ ಸ್ಥಳದಲ್ಲಿಯೇ ಕೆಲವರು ಶೆಡ್ ನಿರ್ಮಿಸಿದ್ದು, ಪಕ್ಕದ ಕಾಂಪೌಂಡ್ ಗೊಡೆ ಕೂಡ ಕುಸಿದಿದೆ.

ಒಂದು ವೇಳೆ ಇದೇ ರೀತಿಯ ನಿರ್ಲಕ್ಷ್ಯ ತೋರಿಸಿದಲ್ಲಿ ಒತ್ತುವರಿಯಾಗುವ ಸಾಧ್ಯತೆಯನ್ನು ಅಲ್ಲಗೆಳೆಯುವಂತೆ ಎಂದು ಕೆಲವರು ಈ ಬಗ್ಗೆ  ತಮ್ಮ ಅಸಮಾಧಾನವನ್ನು ಹೊರಹಾಕಿ ಸಾಮಾಜಿಕ ಜಾಲತಾಣದ ಮೂಲಕ ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದ ಅವರ ಗಮನ ಸೆಳೇದಿದ್ದಾರೆ.

ಅದಕ್ಕೆ ತಕ್ಷಣ ಸ್ಪಂದಿಸಿದ ಶಾಸಕ ಬೆಲ್ಲದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ಪ್ರಜಾಕಿರಣ.ಕಾಮ್ ಗೆ ಖಚಿತಪಡಿಸಿವೆ.

ಈ ಬಗ್ಗೆ ಈಗಲಾದರೂ ಸಮಾಜ ಕಲ್ಯಾಣ ಇಲಾಖೆ ಎಚ್ಚೆತ್ತುಕೊಂಡು  ಕಳೆಗಳಿಂದ ತುಂಬಿ ತುಳುಕುತ್ತಿರುವ ಅಂಬೇಡ್ಕರ್ ಭವನ ಮತ್ತೆ ಮೊದಲಿನಂತೆ ಕಂಗೋಳಿಸುವಂತೆ ಮಾಡುತ್ತಾರೆಯೇ ಇಲ್ಲವೇ ಎಂಬುದು ಕಾದುನೋಡಬೇಕಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *