ರಾಜ್ಯ

ಧಾರವಾಡದಲ್ಲಿ ಮತ್ತೆ ಕಾಡು ಪ್ರಾಣಿಗಳ ದಾಳಿ : ಇಬ್ಬರು ಮಹಿಳೆಯರಿಗೆ ಗಾಯ

ಧಾರವಾಡ prajakiran.com : ಧಾರವಾಡ ತಾಲೂಕಿನ ಕವಲಗೇರಿ ಹಾಗೂ ಗೋವನಕೊಪ್ಪ ಗ್ರಾಮದ ಕಾರ್ಮಿಕ ಮಹಿಳೆಯರಾದ ಬಸವನ್ನೆವ್ವ ಕುಲಕರ್ಣಿ ಹಾಗೂ ಮಂಜುಳಾ ತೋಟಗೆರ ಅವರ ಮೇಲೆ ಕಾಡು ಪ್ರಾಣಿ ದಾಳಿ ಮಾಡಿದೆ.

ಇಬ್ಬರು ಗಾಯಾಳುಗಳು ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ ಕೆಲವರು ಚಿರತೆ ದಾಳಿ ಎಂದು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಇದು ಈವರೆಗೆ ಖಚಿತ ಗೊಂಡಿಲ್ಲ.

ಹೀಗಾಗಿ ಜನತೆ ಅನಗತ್ಯ ಗಾಳಿ ಸುದ್ದಿ ನಂಬಬೇಡಿ ಎಂದು ಜಿಲ್ಲೆಯ ಅರಣ್ಯ ಸಂರಕ್ಷಣಾಧಿಕಾರಿ ಯಶವಂತ ಕ್ಷಿರಸಾಗರ ಮನವಿ ಮಾಡಿದ್ದಾರೆ‌.

ಇದು ಚಿರತೆ ಅಥವಾ ತೋಳ ಇಲ್ಲವೇ ಬೇರೆ ಕಾಡುಪ್ರಾಣಿ ಇರಬಹುದು. ರಾತ್ರಿ ಜಿಲ್ಲೆಯ ಅರಣ್ಯ ಇಲಾಖೆಯ ವತಿಯಿಂದ ಕಾರ್ಯಾಚರಣೆ ನಡೆಸುವ ಮೂಲಕ ಅಧಿಕೃತ ಮಾಹಿತಿ ನೀಡಲಾಗುವುದು.

ಅಲ್ಲಿಯವರೆಗೆ ಜನತೆ ಅರಣ್ಯ ಅಧಿಕಾರಿಗಳಿಗೆ ಸಹಕಾರ ನೀಡಬೇಕು.

ತಕ್ಷಣ ಕಾಡು ಪ್ರಾಣಿಯನ್ನು ಗುರುತಿಸಿ ಸೇರೆ ಹಿಡಿಯುವ ಬಗ್ಗೆ ಸೂಚನೆ ನೀಡಲಾಗಿದೆ ಎಂದರು

ಜೊತೆಗೆ ಗ್ರಾಮಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಮಾತನಾಡಲಾಗಿದೆ ಎಂದು ಹೇಳಿದರು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *