ಚೆನ್ನೈ (ತಮಿಳುನಾಡು) Prajakiran.com : ತಮಿಳುನಾಡು ಚುನಾವಣೆಯಲ್ಲಿ ಸೋಲನುಭವಿಸಿದ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಣ್ಣಾಮಲೈ ಅವರು ಸೋಲು ಜೀವನದ ಒಂದು ಭಾಗ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸೋಲುಗಳು ಜೀವನದ ಒಂದು ಭಾಗ.
ಇಂತಹ ಸೋಲುಗಳನ್ನು ನಾನು ಬಹಳ ನೋಡಿದ್ದೇನೆ. ನಾನು ಗೆಲುವಿನ ಗುರಿ ಮುಟ್ಟಬೇಕಿತ್ತು. ಆದರೆ ಆಗಲಿಲ್ಲ.
ಅರವಕುರಿಚ್ಚಿಯಲ್ಲಿ ಬಿಜೆಪಿ ಪರ ಮತ ಹಾಕಿದ 68 ಸಾವಿರಕ್ಕೂ ಅಧಿಕ ಜನರಿಗೆ ಧನ್ಯವಾದ ಎಂದು ತಿಳಿಸಿದ್ದಾರೆ.
ಬಿಜೆಪಿ ಕೆಲಸಗಳಲ್ಲಿ ಸಂಪೂರ್ಣ ವಾಗಿ ತೊಡಗಿಸಿಕೊಳ್ಳುತ್ತೇನೆ ಎಂದು ಅಣ್ಣಮಲೈ ಹೇಳಿದ್ದಾರೆ.