ಬೆಂಗಳೂರು prajakiran.com :
ಬಿಬಿಎಂಪಿಯ ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕದಿರೇಶ್ ಸಹೋದರಿ ಮಾಲಾ ಹಾಗೂ ಆಕೆಯ ಪುತ್ರ ಅರುಳ್ ನನ್ನು ಬಂಧಿಸಿದ್ದಾರೆ.
ಈ ಮೂಲಕ ಹತ್ಯೆ ಹಿಂದೆ ಕುಟುಂಬದವರ ಸಂಚಿರುವುದು ಬೆಳಕಿಗೆ ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ
ಬೆಂಗಳೂರು ಕಾಟನ್ ಪೇಟೆ ಪೊಲೀಸರು ಈಗಾಗಲೇ ಮಾಲಾ ಹಾಗೂ ಆಕೆಯ ಪುತ್ರ ಅರುಳ್ ಹಾಗೂ ಸೊಸೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ಆಗ ರೇಖಾ ಹತ್ಯೆಯಲ್ಲಿ ಮಾಲಾ ಹಾಗೂ ಅರುಳ್ ಪಾತ್ರದ ಬಗ್ಗೆ ಮಹತ್ತರವಾದ ಸಾಕ್ಷಿಗಳನ್ನು ಸಂಗ್ರಹಿಸಿದ ಬಳಿಕ ಇಬ್ಬರಿಗೂ ಖೆಡ್ಡಾ ತೋಡಿದ್ದಾರೆ.
ಈ ಪ್ರಕರಣ ಸಂಬಂಧ ಈವರೆಗೆ 7 ಆರೋಪಿಗಳನ್ನು ಬಂಧಿಸಲಾಗಿದೆ. ಜೊತೆಗೆ ವಿಚಾರಣೆ ಇನ್ನಷ್ಟು ತೀವ್ರಗೊಂಡಿದೆ ಎಂದು
ಬೆಂಗಳೂರು ಕಾಟನ್ ಪೇಟೆ ಪೊಲೀಸರು ತಿಳಿಸಿದ್ದಾರೆ.