ಹುಬ್ಬಳ್ಳಿ prajakiran.com : ಮುಷ್ಕರದ ಸಂದರ್ಭದಲ್ಲಿ ಸಾರಿಗೆ ಸಂಸ್ಥೆಯ ನೌಕರರ ಮೇಲಿನ ಎಲ್ಲ ಪ್ರಕರಣಗಳನ್ನು ರದ್ದುಗೊಳಿಸಬೇಕು ಎಂದು ವಾಕರಾರ ಸಂಸ್ಥೆಯ ನೌಕರರ ಕೂಟದ ಗೌರವ ಅಧ್ಯಕ್ಷ ಪಿ.ಎಚ್. ನೀರಲಕೇರಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
ಭಾನುವಾರ ನಗರದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕಳೆದ ನಾಲ್ಕು ವರ್ಷಗಳಿಂದ ಸಂಸ್ಥೆಯ ನೌಕರರು ತಮ್ಮ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೋರಾಟ ಮಾಡುತ್ತ ಬಂದಿದ್ದಾರೆ.
ಸರಕಾರ ತಮ್ಮ ಬೇಡಿಕೆಗಳನ್ನು ಈಡೇರಿಸದ ಪರಿಣಾಮ ಇತ್ತೀಚೆಗೆ ಮುಷ್ಕರ ನಡೆಸಿದ್ದರು.
ಈ ಸಂದರ್ಭದಲ್ಲಿ ನೌಕರರ ವರ್ಗಾವಣೆ, ಅಮಾನತ್ ಮಾಡಲಾಗಿತ್ತು. ಅಲ್ಲದೇ ಮುಷ್ಕರನಿರ ನೌಕರರ ಮೇಲೆ ಪೊಲೀಸ್ ಪ್ರಕರಣಗಳನ್ನು ದಾಖಲಿಸಲಾಗಿದೆ.
ಇದರಿಂದ ನೌಕರರು ಮತ್ತಷ್ಟು ತೊಂದರೆ ಅನುಭವಿಸುವಂತಾಗಿದೆ.
ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಯಾರೂ ಸ್ಪಂದಿಸುತ್ತಿಲ್ಲ.
ಆದ್ದರಿಂದ ವರ್ಗಾವಣೆ, ಅಮಾನಂತಹ ಆದೇಶಗಳನ್ನು ಹಿಂದಕ್ಕೆ ಪಡೆಯಬೇಕು. ಮತ್ತು ಪೊಲೀಸ್ ಪ್ರಕರಣಗಳನ್ನು ರದ್ದುಗೊಳಿಸಿ
ನೌಕರರು ನೆಮ್ಮದಿಯಿಂದ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ರೈತರ ಅನುಕೂಲಕ್ಕಾಗಿ ಸರಕಾರ ಬೆಂಬಲ ಬೆಲೆಯಲ್ಲಿ ಹೆಸರು ಖರೀದಿಸಲು ಕೂಡಲೇ ಮುಂದಾಗಬೇಕು.
ಪ್ರತಿ ಹಿಡುವಳಿಗೆ ಕನಿಷ್ಠ 15 ಕ್ವಿಂಟಲ್ ಹೆಸರು ಖರೀದಿ ಮಾಡಬೇಕು.
ಹಾಗು ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸಲು ಅಗತ್ಯ ಕ್ರಮ ಕೈಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಮನವಿಗೆ ಸ್ಫಂದಿಸಿದ ಮುಖ್ಯಮಂತ್ರಿಗಳು ಸಾರಿಗೆ ನೌಕರರ ಬೇಡಿಕೆಗಳನ್ನು ಸದ್ಯದಲ್ಲಿಯೇ ಬಗೆಹರಿಸುವುದಾಗಿ ಭರವಸೆ ನೀಡಿದರು.