ಧಾರವಾಡ prajakiran.com : ಧಾರವಾಡದ ಸುಪರ್ ಮಾರ್ಕೆಟ್ ದಲ್ಲಿನ ಅಂಗಡಿಗಳ ತೆರವು ಕಾರ್ಯಾಚರಣೆ ವಿರೋಧಿಸಿ ಹಾಗೂ
ವ್ಯಾಪಾರಸ್ಥರಿಗೆ ವ್ಯಾಪಾರ ವಹಿವಾಟು ಮಾಡಲು ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಧಾರವಾಡದ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ಅಂಗಡಿಗಳನ್ನು ಮುಟ್ಟದೆ, ಅಭಿವೃದ್ಧಿ ಕಾರ್ಯ ಕೈಗೊಳ್ಳಲು ನ್ಯಾಯಾಲಯ ಆದೇಶ ಹೊರಡಿಸಿದೆ.
ಆದರೂ ಸಹ ದಬ್ಬಾಳಿಕೆಯಿಂದ ಅಂಗಡಿ ತೆರವು ಕಾರ್ಯಾಚರಣೆ ನಡೆಸಿರುವುದು ಸರಿಯಲ್ಲ ಎಂದು ಧಾರವಾಡ ಪ್ರಗತಿಪರ ಚಿಕ್ಕ ವರ್ತಕರ ಸಂಘದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿಕೊಟ್ಟರು.
ಸಮಸ್ಯೆ ಆಲಿಸಲು ಶೀಘ್ರದಲ್ಲಿಯೇ ಪಾಲಿಕೆ ಅಧಿಕಾರಿಗಳು ಹಾಗೂ ವ್ಯಾಪಾರಸ್ಥರ ಸಭೆ ಕರೆದು ಚರ್ಚಿಸುವ ಭರವಸೆ ನೀಡಿದರು..
ಈ ಸಂದರ್ಭದಲ್ಲಿ ಧಾರವಾಡ ಸುಪರ್ ಮಾರ್ಕೆಟ್ ವರ್ತಕರು ಇದ್ದರು.