ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಪಕ್ಷದ ಮುಖಂಡ ದೀಪಕ ಚಿಂಚೋರೆ ನೇತೃತ್ವದಲ್ಲಿ ನಡೆಸುತ್ತಿದ್ದ
ಪ್ರತಿಭಟನೆಯನ್ನು ತಡೆದ ಪೊಲೀಸರು ಕಾರ್ಮಿಕರನ್ನು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಗುರುವಾರ ಮಧ್ಯಾಹ್ನ ಬಂಧಿಸಿದರು.
ಅವರನ್ನು ಧಾರವಾಡದ ಪೊಲೀಸ್ ಹೆಡ್ ಕ್ಟಾಟ್ರಸ್ ನಲ್ಲಿ ಇರಿಸಿ ಆನಂತರ ಬಿಡುಗಡೆಗೊಳಿಸಿದರು.
ಆ ಮೂಲಕ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಪೊಲೀಸರು ಮೊಟಕುಗೊಳಿಸಿದ್ದಾರೆ.
ಜೊತೆಗೆ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಹಾಕಲಾದ ಟೆಂಟನ್ನು ಕಿತ್ತು ಹಾಕಲಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧ ಇದು ಖಂಡನೀಯವಾಗಿದೆ ಎಂದು ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಆರೋಪಿಸಿದರು.
ಜಲಮಂಡಳಿ ಗುತ್ತಿಗೆ ಕಾರ್ಮಿಕರ ವೇತನ ಬಿಡುಗಡೆ ಹಾಗೂ ಕವಿವಿ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸದ ಸರಕಾರದ ಕ್ರಮವನ್ನು ವಿರೋಧಿಸಿ ಧರಣಿ ಸತ್ಯಾಗ್ರಹವನ್ನು ನಡೆಸಲಾಗುತ್ತಿತ್ತು.