ಧಾರವಾಡ Prajakiran.com : 2021 – 22 ನೇ ಸಾಲಿನ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಲಾಗುವುದು ಎಂದು ಸರ್ಕಾರದಿಂದ ಭರವಸೆ ನೀಡಿದ್ದರು.
ಆದರೆ ಅದು ಹುಸಿಯಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರ ಫೆಡರೇಷನ್ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಬಜೆಟ್ ನಲ್ಲಿ ಅಂಗನವಾಡಿ ಹಾಗೂ ಸಹಾಯಕರಿಗೆ ಗೌರವಧನ ಹೆಚ್ಚಳ ಹಾಗೂ ಇತರ ಸೌಲಭ್ಯಗಳನ್ನು ಘೋಷಿಸದೆ ಇರುವುದು ನಿರಾಸೆ ಮೂಡಿಸಿದೆ.
ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ನಮ್ಮ ಬೇಡಿಕೆಯನ್ನು ಪೂರೈಸಲು ಮುಂದಾಗಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಎಚ್ಚರಿಸಿದರು.
ಪಿಂಚಣಿ ಸೌಲಭ್ಯ, ಗೌರವಧನ,ಇಎಸ್ಐ ಸೌಲಭ್ಯ, ಅಂಗನವಾಡಿ ಉನ್ನತಿಕರಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಎಐಟಿಯುಸಿ ಸಂಘಟನೆ ನೇತೃತ್ವದಲ್ಲಿ ಧಾರವಾಡದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.