ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈಗಾಗಲೇ 58 ಜನ ಕರೋನಾ ಹಾಗೂ ಇತರೆ ಕಾಯಿಲೆಗಳಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಇಂತಹ ಸಂಕಷ್ಟದ ಸಂದರ್ಭದಲ್ಲಿಯೂ ಕರೋನಾ ಸೇನಾನಿಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಎರಡನೇ ಎ ಎಸ್ ಐ ಒಬ್ಬರು ಸೋಂಕಿಗೆ ಸಿಲುಕಿ ಇಹಲೋಕ ತ್ಯಜಿಸಿದ್ದಾರೆ.
ಧಾರವಾಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಪಾಸ್ ಪೋರ್ಟ್ ವಿಭಾಗದಲ್ಲಿ ಸಹಾಯಕ ಸಬ್ ಇನ್ಸಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿ ಹೈ ಶುಗರ್ ನಿಂದ ಬಳಲುತ್ತಿದ್ದರು.
ಅವರನ್ನ ಧಾರವಾಡದ ನಿಯೋಜಿತ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಾಲ್ಕು ದಿನಗಳ ಬಳಿಕ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯ ಎ ಎಸ್ ಐ ಒಬ್ಬರು ಕರೋನಾ ವಿರುದ್ದ ಸೆಣಸಾಡಲು ಸಾಧ್ಯವಾಗದೆ ವಿಧಿವಶರಾಗಿರುವುದು ಹಚ್ಚ ಹಸಿರಾಗಿರುವಾಗಲೇ ಜಿಲ್ಲೆಯಲ್ಲಿ ಮತ್ತೊಬ್ಬ ಎ ಎಸ್ ಐ ಕರೋನಾಗೆ ಸಾವನ್ನಪ್ಪಿದು ಜಿಲ್ಲೆಯ ಜನತೆಗೆ ಮತ್ತೋಮ್ಮೆ ಬೆಚ್ಚಿಬೀಳುವಂತೆ ಮಾಡಿದೆ .
ಈಗಾಗಲೇ ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿಗೆ ಬಂದು ನಿಂತಿದೆ. ಇದುವರೆಗೆ 662 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.1194 ಪ್ರಕರಣಗಳು ಸಕ್ರಿಯವಾಗಿವೆ. ಆ ಮೂಲಕ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 1914 ಕ್ಕೆ ಏರಿದೆ.
ಇಂತಹ ಸಂಕಷ್ಟದ ಸಂದರ್ಭದಲ್ಲೂ ಎದೆಗುಂದದೆ ಅದನ್ನು ಸಮರ್ಥವಾಗಿ ಎದುರಿಸುತ್ತಾ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಧಾರವಾಡ ಜಿಲ್ಲಾಡಳಿತದ ಎಲ್ಲಾ ಕರೋನಾ ಸೇನಾನಿಗಳಿಗೆ ನಮ್ಮದೊಂದು ನಮನ.