ರಾಜ್ಯ

ಬಯಲು ಸೀಮೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ರೂಪುರೇಷೆ ನೀಡಲು ಪ್ರಾಮಾಣಿಕ ಪ್ರಯತ್ನ : ತವನಪ್ಪ ಅಷ್ಟಗಿ

ಚಿತ್ರದುರ್ಗ prajakiran.com : ಧಾರವಾಡದ ಹಿರಿಯ ಬಿಜೆಪಿ ಮುಖಂಡ ತವನಪ್ಪ ಅಷ್ಟಗಿ ಚಿತ್ರದುರ್ಗದಲ್ಲಿ ಇರುವ ಬಯಲು ಸೀಮೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು.

ಅವರಿಗೆ ಧಾರವಾಡ ಜಿಲ್ಲೆಯ ಬಿಜೆಪಿ ಮುಖಂಡರು ಸಾಥ್ ನೀಡಿ, ಅಭಿನಂದಿಸಿ ತಮ್ಮ ಸಂತಸ ಹಂಚಿಕೊಂಡರು.

ಅ ಬಳಿಕ ಇಂತಹ ಮಹತ್ವದ ಹುದ್ದೆ ಕೊಡಿಸಲು ಕಾರಣಿಕರ್ತರಾದ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರನ್ನು ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿದರು.

ಅಲ್ಲದೆ, ತಮಗೆ ಇಂತಹ ಮಹತ್ವದ ಹುದ್ದೆ ನೀಡಿದ್ದು, ಅದಕ್ಕೆ ಹೊಸರೂಪುರೇಷೆ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲು ಹಗಲು ರಾತ್ರಿ ಎನ್ನದೆ ಕಾಲಿಗೆ ಚಕ್ರ ಕಟ್ಟಿಕೊಂಡು ಹದಿನಾಲ್ಕು ಜಿಲ್ಲೆಯ ವ್ಯಾಪ್ತಿಯಲ್ಲಿ ಸಂಚರಿಸುವ ಭರವಸೆ ನೀಡಿದರು.

ಇದೇವೇಳೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕೂಡ ತವನಪ್ಪ ಅಷ್ಟಗಿಯವರಿಗೆ ಸನ್ಮಾನಿಸಿ ಗೌರವಿಸಿ, ಉತ್ತಮ ರೀತಿಯಲ್ಲಿ ಶ್ರಮಿಸುವಂತೆ ಸಲಹೆ ನೀಡಿ ಅಭಿನಂದಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *