ಧಾರವಾಡ prajakiran.com : ಇಲ್ಲಿನ ಕೇಂದ್ರ ಕಾರಾಗೃಹದ ಸಿಬ್ಬಂದಿ ಮೇಲೆ ಖೈದಿಯೊಬ್ಬ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕೇಂದ್ರ ಕಾರಾಗೃಹದ ಪ್ರಥಮ ದರ್ಜೆ ಸಹಾಯಕ ಕೆ.ಎಸ್. ವಾವರೆ ಅವರೇ ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ.
ಸಜಾ ಖೈದಿ ಅವಿನಾಶ ಬಾಜಿಲಕೇರಿ ಹಾಗೂ ಪ್ರಭಾಕರ ನಾಯಕ ಎಂಬುವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಮೇ 28ರಂದು ವಾವರೆ ಅವರೊಂದಿಗೆ ಸುಖಾಸುಮ್ಮನೆ ಜಗಳ ತೆಗೆದ ಖೈದಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಹಲ್ಲೆ ಸಹ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ.
ಈ ಕುರಿತು ವಾವರೆ ಅವರು ಮೇ 30ರಂದು ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನಿಖೆ ಮುಂದುವರೆದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಧಾರವಾಡ ಜೈಲರ್ ಅನಿತಾ ಅವರು, ಇಬ್ಬರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದಿದೆ. ಹೊರತು ಯಾವುದೇ ರೀತಿಯ ಹಲ್ಲೆ ನಡೆದಿಲ್ಲ. ಈ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.