ಅಂತಾರಾಷ್ಟ್ರೀಯ

ದೆಹಲಿ ರೈತನ ಮೇಲೆ ಹಲ್ಲೆ ನಡೆಸಿದ ಪೊಲೀಸರ ಪೋಟೋ ಕ್ಲಿಕ್ಕಿಸಿದ ವರದಿಗಾರನ ಮೇಲೆ ದುಷ್ಕರ್ಮಿಗಳ ತಂಡ ದಾಳಿ ….!

ನವದೆಹಲಿ prajakiran.com : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನ ವಿರೋಧಿಸಿ ರೈತರ ಪ್ರತಿಭಟನೆಯಲ್ಲಿ ವೃದ್ಧ ರೈತನ ಮೇಲೆ ಪೊಲೀಸರು ಬಲವಂತಾಗಿ ಲಾಠಿ ಬೀಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

ಆದರೀಗ ಆ ಫೋಟೋ ಕ್ಲಿಕ್ಕಿಸಿದ ಫೋಟೋ ವರದಿಗಾರನ ಮೇಲೆ ದುಷ್ಕರ್ಮಿಗಳ ತಂಡ ದಾಳಿ ಎಂದು ಸ್ವತಃ ವರದಿಗಾರನೆ ಹೇಳಿದ್ದಾನೆ.

ದೆಹಲಿ ಮೂಲದ ಪಿಟಿಐ ನ ಫೋಟೋ ವರದಿಗಾರರಾದ ರವಿ ಚೌಧರಿ ಈ ವಿಚಾರವನ್ನು ಸ್ವತಃ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ನಾನು ಬೈಕ್‌ನಲ್ಲಿ ಹೋಗುತ್ತಿದ್ದಾಗ ಬೊಲೆರೋ ವಾಹನದಲ್ಲಿ ಬಂದ 5 ರಿಂದ 6 ಮಂದಿ ದುಷ್ಕರ್ಮಿಗಳು ನನ್ನ ಮೇಲೆ ದಾಳಿ ನಡೆಸಿದ್ದಾರೆ ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮುರಾದ್‌ನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲು ಹೋದರೆ ಎಫ್‌ಐಆರ್‌ ದಾಖಲಿಸಲು ಪೊಲೀಸರು ನಿರಾಕರಿಸಿದ್ದರು.

ಈ ಕುರಿತು ವರದಿಗಾರನ ಟ್ವೀಟ್ ವೈರಲ್ ಆಗುತ್ತಿದ್ದಂತೆ ಒಂದು ದಿನದ ಬಳಿಕ ಇಂದು ಘಜಿಯಾಬಾದ್ ಪೊಲೀಸ್‌ ಆನ್ ಲೈನ್ ಎಫ್ಐಆರ್ ದಾಖಲಿಸಿದ್ದು, ಈ ರೀತಿಯ ತ್ವರಿತ ಕ್ರಮಕ್ಕಾಗಿ ವರದಿಗಾರ ರವಿ ಧನ್ಯವಾದಗಳು ತಿಳಿಸಿದ್ದಾರೆ.

ನೈಜ ಘಟನೆ ಕುರಿತು ವರದಿ ಮಾಡಿದ ವರದಿಗಾರನೀಗ ಸಂಕಷ್ಟ ಎದುರಿಸುವಂತೆ ಆಗಿರುವುದು ವಿಪರ್ಯಾಸದ ಸಂಗತಿಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *